ಶಿವಮೊಗ್ಗ:ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪರಿಗೆ ಕೊರೋನಾ ಪಾಸಿಟಿವ್..!
ಶಿವಮೊಗ್ಗ : ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಿಮ್ಮಪ್ಪ ಅವರಿಗೆ ಏಕಾಏಕಿ ಜ್ವರ ಕಾಣಿಸಿಕೊಂಡು ಸುಸ್ತಾದ ಹಿನ್ನೆಲೆಯಲ್ಲಿ ಕೊಂಚ ಅಸ್ವಸ್ಥಗೊಂಡರು.
ಈ ಹಿನ್ನೆಲೆಯಲ್ಲಿ ಅವರಿಗೆ ಕೋವಿಡ್19 ಪರೀಕ್ಷೆ ನಡೆಸಿದ್ದು, ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಜಯನಗರ ಅಪೊಲೋ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತಿಚೀಗೆ ನಡೆದ ಭೂಸುಧಾರಣಾ ಕಾಯ್ದೆ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರುದ್ಧ ಹೋರಾಟ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು.
ಅದಷ್ಟು ಬೇಗ ಹಿರಿಯರಾದ ಕಗೋಡು ತೀಮ್ಮಪ್ಪನವರು ಗುಣಮುಖರಾಗಿಲಿ ಎಂದು ಜಿಲ್ಲೆಯ ಜನತೆ ಹಾರೈಹಿಸಿದ್ದಾರೆ.