ಶಿವಮೊಗ್ಗ: VISL ನೌಕರ‌‌ ಸಾವು ರಸ್ತೆಗೆ ಇಳಿದು ಕಾರ್ಮಿಕರು ಪ್ರತಿಭಟನೆ …!

ಶಿವಮೊಗ್ಗ: VISL ನೌಕರ‌‌ ಸಾವು ರಸ್ತೆಗೆ ಇಳಿದು ಕಾರ್ಮಿಕರು ಪ್ರತಿಭಟನೆ …!

ಶಿವಮೊಗ್ಗ :ಭದ್ರಾವತಿಯಲ್ಲಿ ಕರ್ತವ್ಯ ನಿರತನಾಗಿದ್ದ ಗುತ್ತಿಗೆ ನೌಕರನೊಬ್ಬರು ತೀವ್ರ ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದು, ಕಾರ್ಖಾನೆ ಮುಂಭಾಗದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಎಸ್ಐಎಲ್ ಗುತ್ತಿಗೆ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಅಂಥೋಣಿ ರಾಜ್(47) ಎನ್ನುವವರು ಇಂದು ಕರ್ತವ್ಯದಲ್ಲಿದ್ದಾಗಲೇ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

VISL ಕಾರ್ಖಾನೆಯ ನಿಯಮಾವಳಿಗಳ ಅನ್ವಯ ಸಿಬ್ಬಂದಿಗಳು ಕರ್ತವ್ಯದಲ್ಲಿದ್ದ ವೇಳೆಯಲ್ಲಿ ಅಪಘಾತ ಅಥವಾ ಅವಘಡಗಳು ಸಂಭವಿಸಿದರೆ ಮಾತ್ರ ಪರಿಹಾರ ನೀಡಲಾಗುತ್ತದೆ.

ಆದರೆ, ಈಗ ಅಂಥೋಣಿಯವರು ಹೃದಯಾಘಾತದಿಂದ ನಿಧನರಾಗಿರುವ ಹಿನ್ನೆಲೆಯಲ್ಲಿ ಪರಿಹಾರ ದೊರೆಯುವುದಿಲ್ಲ ಎಂದು ಹೇಳಲಾಗಿದೆ.

ಆದರೆ, ಅಂಥೋಣಿಯವರು ಕರ್ತವ್ಯದಲ್ಲಿದ್ದ ವೇಳೆಯಲ್ಲಿಯೇ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಹಾಗೂ ಕುಟುಂಬದಲ್ಲಿ ಓರ್ವರಿಗೆ ಉದ್ಯೋಗ ನೀಡಬೇಕು ಎಂದು ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವಿಚಾರದ ಕುರಿತಾಗಿ ಮೃತರ ಕುಟುಂಬಸ್ಥರು-ನೌಕರರು-ಕಾರ್ಮಿಕರು ಹಾಗೂ ಕಾರ್ಖಾನೆ ಅಧಿಕಾರಿಗಳ ನಡುವೆ ವಾಗ್ವಾದ-ಮಾತುಕತೆಗಳು ನಡೆಯುತ್ತಿದೆ.

ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಸ್ಥಳಕ್ಕೆ ಭೇಟಿ ನೀಡಿ, ಸಂಧಾನ ಮಾತುಕತೆ ನಡೆಸುತ್ತಿದ್ದಾರೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!