ನಿರಂತರ ಜ್ಯೋತಿ ಯೋಜನೆ ಕಾಮಗಾರಿ ಲೋಪ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚನೆ : ಸಚಿವ ಕೆ.ಎಸ್.ಈಶ್ವರಪ್ಪ..!

ನಿರಂತರ ಜ್ಯೋತಿ ಯೋಜನೆ ಕಾಮಗಾರಿ ಲೋಪ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚನೆ : ಸಚಿವ ಕೆ.ಎಸ್.ಈಶ್ವರಪ್ಪ..!

ಶಿವಮೊಗ್ಗ : ನಿರಂತರ ಜ್ಯೋತಿ ಕಾಮಗಾರಿ ಅನುಷ್ಟಾನದಲ್ಲಿ ಲೋಪದೋಷಗಳು ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ತನಿಖೆ ನಡೆಸಿ 15ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿನ ಲೋಪದೋಷಗಳ ಬಗ್ಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು, ವಿಷಯ ತಜ್ಞರು ಹಾಗೂ ಜನಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ಸ್ಥಳೀಯವಾಗಿ ರಚಿಸಲಾಗುವುದು. ಈ ಸಮಿತಿಗೆ ಎಲ್ಲಾ ಮಾಹಿತಿಯನ್ನು ತಕ್ಷಣ ಒದಗಿಸಬೇಕು.

ಸಮಿತಿ ಪರಿಶೀಲನೆ ನಡೆಸಿ 15ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸಬೇಕು. ಅಗತ್ಯ ಬಿದ್ದರೆ ಹೆಚ್ಚಿನ ತನಿಖೆ ಕೈಗೊಳ್ಳುವ ಕುರಿತು ನಿರ್ಧಾರಿಸಲಾಗುವುದು ಎಂದರು.

ಯೋಜನೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ಗುತ್ತಿಗೆದಾರನಿಗೆ ಸಂಪೂರ್ಣ ಹಣವನ್ನು ಪಾವತಿಸಲಾಗಿದೆ. ಫೀಡರ್‍ಗಳಲ್ಲಿ ಅಳವಡಿಸಿರುವ ಕಂಬಗಳ ಬಗ್ಗೆಯೂ ಸರಿಯಾಗಿ ಲೆಕ್ಕ ಇರುವುದಿಲ್ಲ. ಪ್ರತಿ ಕಂಬಗಳಿಗೆ ಸಂಖ್ಯೆಯನ್ನೂ ನಮೂದಿಸಿರುವುದಿಲ್ಲ.

ಕಾಮಗಾರಿ ಆರಂಭಕ್ಕಿಂತ ಮೊಲು ಗುತ್ತಿಗೆದಾರನೊಂದಿಗೆ ಬಾಂಡ್ ಬರೆಯಿಸಿರುವುದಿಲ್ಲ. 2019ರಿಂದ ಜಿಲ್ಲೆಯಲ್ಲಿ ಈ ಯೋಜನೆ ಅನುಷ್ಟಾನ ಆರಂಭಿಸಲಾಗಿದ್ದು, ಮೂಲ ಕ್ರಿಯಾ ಯೋಜನೆಯನ್ನು ಉಲ್ಲಂಘಿಸಿ ಕಾಮಗಾರಿ ಅನುಷ್ಟಾನಗೊಳಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದರು‌.

ಯೋಜನೆ ಅನುಷ್ಟಾನದಲ್ಲಿನ ಲೋಪದೋಷಗಳನ್ನು ಗುತ್ತಿಗೆದಾರನಿಂದ ಸರಿಪಡಿಸಿಕೊಳ್ಳಬೇಕು.

ಗುತ್ತಿಗೆದಾರನಿಗೆ ಪಾವತಿಯಾಗಿರುವ ಹಣವನ್ನು ವಸೂಲು ಮಾಡಿ, ಲೋಪದೋಷಗಳನ್ನು ಕಾನೂನು ಪ್ರಕಾರ ಸರಿಪಡಿಸಬೇಕು. ಮೆಸ್ಕಾಂ ವ್ಯಾಪ್ತಿಯ ಇತರ ಜಿಲ್ಲೆಗಳಲ್ಲಿ ನಡೆದಿರುವ ಯೋಜನೆ ಅನುಷ್ಟಾನದ ಬಗ್ಗೆ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮೆಸ್ಕಾಂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!