ಶಿಕಾರಿಪುರ ತಾಲೂಕಿನ ತಡಗಣಿಯಲ್ಲಿ 300 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ..!

ಶಿಕಾರಿಪುರ ತಾಲೂಕಿನ  ತಡಗಣಿಯಲ್ಲಿ 300 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ..!

ಶಿರಾಳಕೊಪ್ಪದ ತಡಗಣಿಯಲ್ಲಿ 300 ಹಾಸಿಗೆಯ ಸಾಮರ್ಥ್ಯದ ನೂತನ ಕೋವಿಡ್ ಕೇರ್ ಸೆಂಟರ್ ನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟಿಸಿದರು.

ಈ‌ ವೇಳೆ ಸಂಸದ‌ ಬಿ.ವೈ ರಾಘವೇಂದ್ರ ಮಾತನಾಡಿ ತಾಲೂಕಿನಲ್ಲಿ ಮತ್ತು ಜಿಲ್ಲೆಯಲ್ಲಿ ಯಾವುದೇ ಸೋಂಕಿತರು ವೈದ್ಯಕೀಯ ಸೌಲಭ್ಯದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದೆ.

ಕೋವಿಡ್ ಕೇರ್ ಸೆಂಟರ್ ನಲ್ಲಿ ವೈದ್ಯ ವೃಂದ, ಸಿಬ್ಬಂದಿ ಹಾಗೂ ಸಕಲ‌ ವೈದ್ಯಕೀಯ ಸೌಲಭ್ಯ ಕಲ್ಪಿಸಿ, ಗುಣಮಟ್ಟದ ಚಿಕಿತ್ಸೆ ಒದಗಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರಾದ ಕೆ. ಎಸ್‌. ಈಶ್ವರಪ್ಪನವರು, ದತ್ತಾತ್ರಿ ,ಎಂಐಡಿಬಿ ಅಧ್ಯಕ್ಷ ಗುರುಮೂರ್ತಿ ವೈದ್ಯಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!