ತೀರ್ಥಹಳ್ಳಿ:ಕವಲೆದುರ್ಗ ಶ್ರೀಗಳು ಕರೋನಾಗೆ ಬಲಿ..!

ತೀರ್ಥಹಳ್ಳಿ:ಕವಲೆದುರ್ಗ ಶ್ರೀಗಳು ಕರೋನಾಗೆ ಬಲಿ..!

ತೀರ್ಥಹಳ್ಳಿ: ಭುವನಗಿರಿ ಸಂಸ್ಥಾನ ಕವಲೆದುರ್ಗದ ಡಾ. ಶ್ರೀ ಸಿದ್ದಗಂಗಾ ಶಿವಾಚಾರ್ಯ ಸ್ವಾಮೀಜಿ ಕರೋನಾಕ್ಕೆ ಬಲಿಯಾಗಿದ್ದಾರೆ.

ಕೆಲವು ದಿನಗಳ ಹಿಂದೆ ಶೀತ ಸುಸ್ತು ಕಾರಣ ತೀರ್ಥಹಳ್ಳಿ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದರು ಬಳಿಕ ಅವರಿಗೆ ಸೋಂಕು ದೃಢವಾಗಿತ್ತು.

ಶ್ವಾಸಕೋಶ ಸಂಪೂರ್ಣ ಹಾನಿಯಾಗಿತ್ತು ಎನ್ನಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ 2 ದಿನಗಳ ಹಿಂದೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸೋಮವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಳೆದ ಒಂದು ವಾರದ ಹಿಂದೆ ಹಳ್ಳಿಗೆ ಹೋಗಿದ್ದೆ ಎಂದು ಮಾಹಿತಿ ನೀಡಿರುವ ಶ್ರೀಗಳು ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ, ಸಿಬ್ಬಂದಿಯ ಸೇವೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾನವೀಯತೆ ಮೆರೆದ ಶ್ರೀಗಳು!:

ಕರೋನಾ ಸೋಂಕು ಬಂದ ತಕ್ಷಣ ತಮ್ಮ ಸಿಬ್ಬಂದಿಗೆ ಮಾಹಿತಿ ನೀಡಿ ತಮ್ಮ ಜತೆ ಇದ್ದ ಓರ್ವ ಶಿಷ್ಯನ ಮನೆ ಸೀಲ್ ಡೌನ್ ಮಾಡಿದ್ದು, ಅವರ ಕುಟುಂಬಕ್ಕೆ ಶ್ರೀಗಳು 15 ಸಾವಿರ ಧನ ಸಹಾಯ ಕಳುಹಿಸಿಕೊಟ್ಟು ಮಾದರಿಯಾಗಿದ್ದರು ಆದ್ರೆ ಇದೀಗ ಅವರೇ ಇಹಲೋಕ ತ್ಯಜಿಸಿದ್ದಾರೆ.


ತೀರ್ಥಹಳ್ಳಿಯಲ್ಲಿ ಅವರ ಅಂತ್ಯ ಸಂಸ್ಕಾರ ಮಠದ ಮತ್ತು ಕರೋನಾ ನಿಯಮದಂತೆ ನಡೆಯಲಿದೆ ಎನ್ನಲಾಗಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!