ಶಿವಮೊಗ್ಗ:ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1ಲಕ್ಷ ಪರಿಹಾರ ಘೋಷಿಸಿದ ಸಿಎಂಗೆ ಸಂಸದ ಬಿ. ವೈ.ರಾಘವೇಂದ್ರ ಅಭಿನಂದನೆ…!
![ಶಿವಮೊಗ್ಗ:ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1ಲಕ್ಷ ಪರಿಹಾರ ಘೋಷಿಸಿದ ಸಿಎಂಗೆ ಸಂಸದ ಬಿ. ವೈ.ರಾಘವೇಂದ್ರ ಅಭಿನಂದನೆ…!](https://shikarinews.com/wp-content/uploads/2021/06/images-1-2.jpeg)
ಶಿವಮೊಗ್ಗ: ಕರೋನಾದಿಂದ ಮರಣ ಸಂಭವಿಸಿದ ಬಿಪಿಎಲ್ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒಂದು ಲಕ್ಷ ರೂ. ಪರಿಹಾರ ಘೋಷಿಸಿರುವುದಕ್ಕೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅಭಿನಂದಿಸಿದ್ದಾರೆ.
![](https://shikarinews.com/wp-content/uploads/2021/06/images-2-2.jpeg)
ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದಲ್ಲಿ ಯಾರಾದರೂ ಕರೋನಾಗೆ ಬಲಿಯಾದರೆ, ಅಂತವರ ಕುಟುಂಬಕ್ಕೆ ಒಂದು ಲಕ್ಷ ರೂ. ಪರಿಹಾರ ಘೋಷಿಸಿರುವುದು ದೇಶದಲ್ಲೇ ಪ್ರಥಮವಾಗಿದೆ.
ಕೋವಿಡ್ನಿಂದ ಸಾಕಷ್ಟು ಕುಟುಂಬಗಳಲ್ಲಿ ದುಡಿಯುವ ವ್ಯಕ್ತಿಗಳೇ ಮೃತಪಟ್ಟಿದ್ದಾರೆ. ಅಂತಹ ಕುಟುಂಬಗಳಿಗೆ ಮುಖ್ಯಮಂತ್ರಿ ಅವರ ಪರಿಹಾರದಿಂದ ನೆರವಾಗಲಿದೆ.
![](https://shikarinews.com/wp-content/uploads/2021/06/IMG_20210614_181720_082.jpg)
ಇದರಿಂದ ರಾಜ್ಯದಲ್ಲಿ 25ರಿಂದ 30 ಸಾವಿರ ಕುಟುಂಬಗಳಿಗೆ ಅನುಕೂಲವಾಗಲಿದ್ದು, ಸರ್ಕಾರಕ್ಕೆ 250ರಿಂದ 300ಕೋಟಿ ರೂ. ವೆಚ್ಚವಾಗಲಿದೆ.
ಬಡವರ ಸಂಕಷ್ಟಕ್ಕೆ ಯಾವಾಗಲೂ ನೆರವಾಗುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನಾದಿಂದ ಸಂಕಷ್ಟಕ್ಕೀಡಾದ ಬಡ ಕುಟುಂಬಗಳಿಗೆ ಮತ್ತೆ ನೆರವಿನ ಹಸ್ತ ಚಾಚಿದ್ದಾರೆ ಎಂದರು.
News by: Raghu Shikari-7411515737