ಶಿಕಾರಿಪುರ : ಹನಿ ನೀರಾವರಿ PMKSY ಯೋಜನೆಯಡಿ ಅರ್ಜಿ ಆಹ್ವಾನ..!
ಶಿಕಾರಿಪುರ ತೋಟಗಾರಿಕೆ ಇಲಾಖೆಯು 2021-22ನೇ ಸಾಲಿಗೆ PMKSY ಯೋಜನೆಯಡಿ ಹನಿ ನೀರಾವರಿ ವ್ಯವಸ್ಥೆ ಅಳವಡಿಸಲು ರೈತರಿಂದ ಅರ್ಜಿ ಆಹ್ವಾನಿಸಿದೆ.
ಪ.ಪಂ. ಮತ್ತು ಸಣ್ಣ, ಅತಿಸಣ್ಣ ರೈತರಿಗೆ ಶೇ. 90 ರಷ್ಟು ಮತ್ತು ಇತರೆ ರೈತರಿಗೆ ಶೇ.45 ರಷ್ಟು ಸಹಾಯಧನ ನೀಡಲಾಗುವುದು.
ಈ ಹಿಂದೆ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆವಿರುವುದಿಲ್ಲ. ಕಾರ್ಯಾದೇಶ ಪಡೆದ ನಂತರವೇ ತೋಟದಲ್ಲಿ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದು.
ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಶಿಕಾರಿಪುರ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 20/10/2021ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ತೋಟಗಾರಿಕೆ ಇಲಾಖೆ ಅಥವಾ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ದೂ.ಸಂ.: 08187-223544 ನ್ನು ಸಂಪರ್ಕಿಸುವುದು.
News by: Raghu Shikari-7411515737