ಶಿಕಾರಿಪುರ :ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಕೊರತೆಯಾಗಬಾರದು : ಬಿ.ವೈ ರಾಘವೇಂದ್ರ

ಶಿಕಾರಿಪುರ :ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಕೊರತೆಯಾಗಬಾರದು : ಬಿ.ವೈ ರಾಘವೇಂದ್ರ

ಶಿಕಾರಿಪುರ ತಾಲೂಕಿನ ಹರಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಹರಗಿಯ ಸರ್ಕಾರಿ ಪ್ರೌಢಶಾಲೆಯ ರಜತ ಮಹೋತ್ಸವ ಸಮಾರಂಭವನ್ನು ಮತ್ತು ಹರಗಿ ಗ್ರಾಮದ ಮಾರಿಯಮ್ಮ ದೇವಸ್ಥಾನದ ಸಮುದಾಯಭವನನ್ನು ಸಂಸದರಾದ ಬಿ. ವೈ. ರಾಘವೇಂದ್ರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು ಶಾಲೆಗಳು ಪ್ರಾರಂಭ ಮಾಡುವುದು ಸುಲಭ ಆದರೆ ಅಲ್ಲಿನ ವ್ಯವಸ್ಥೆ, ಉತ್ತಮ ಆಡಳಿತದಿಂದ ಮುನ್ನೆಡೆಸುವುದು ಸಾವಲಿನ ಸಂಗತಿ, ಸರ್ಕಾರಗಳು ಮಕ್ಕಳ ಶಿಕ್ಷಣಕ್ಕೆ ಕೋಟಿ ಕೋಟಿ ಹಣವನ್ನು ಬಳಸುತ್ತದೆ, ಗ್ರಾಮೀಣ ಮಟ್ಟದಲ್ಲೂ ನಮ್ಮ ವಿದ್ಯಾರ್ಥಿಗಳಿಗೆ ಅನೇಕ ಸೌಲಭ್ಯಗಳು ಸಿಗುತ್ತಿದೆ.

ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಕೊರತೆಯಾಗಬಾರದು, ಈ ರೀತಿಯ ಘಟನೆಗಳು ನೆಡೆದರೆ ನನ್ನ ಗಮನಕ್ಕೆ ತನ್ನಿ ಎಂದು ಸಂಸದರಾದ ಬಿ. ವೈ ರಾಘವೇಂದ್ರ ತಿಳಿಸಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚನ್ನವೀರಪ್ಪ,ಶಾಲಾಭಿವೃದ್ದಿ ಸಮಿತಿಯಅಧ್ಯಕ್ಷರಾದ ಶೇಖರ್,ಅರಣ್ಯ ಅಭಿವೃದ್ಧಿ ನಿಗಮ ಉಪಾಧ್ಯಕ್ಷರಾದ ಕೊಳಗಿ ರೇವಣಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಮ್ಮ ಸುಬ್ಬಣ್ಣ, ಹನುಮಂತಪ್ಪ, ಮದುಕೇಶ್ ಶಾಲೆಯ ಶಿಕ್ಷಕ ಸಿಬ್ಬಂದಿಗಳು ಮತ್ತಿತರರು ಇದ್ದರು.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!