ಶಿಕಾರಿಪುರ: ಎರಡನೇ ದಿನವೂ ಮುಂದುವರಿದ ಪೌರ ಕಾರ್ಮಿಕರ ಅನಿರ್ದಿಷ್ಟ ಅವಧಿ ಮುಷ್ಕರ..!
ಶಿಕಾರಿಪುರ ಪಟ್ಟಣದ ಪುರಸಭೆಯ ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರ ಕಾರ್ಮಿಕರ ನೌಕರರು ಪ್ರತಿಭಟನಾ ಧರಣಿ ನಡೆಸುತ್ತಿದ್ದು ಎರಡನೇ ದಿನವೂ ಮುಂದುವರಿದಿದೆ.
ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಧರಣಿಗೆ ಕಾಂಗ್ರೆಸ್ ಪಕ್ಷದ ಮುಖಂಡರು ಬೆಂಬಲವನ್ನು ಸೂಚಿಸಿದ್ದಾರೆ.
ಇನ್ನೂ ಬಿಜೆಪಿ ಪಕ್ಷದ ಕೆಲ ಪುರಸಭಾ ಸದಸ್ಯರು ಮತ್ತು ಜಯ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಹುಲಿಗಿ ಕೃಷ್ಣ ಅವರು ಪೌರ ಕಾರ್ಮಿಕರಿಗೆ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
News By: Raghu Shikari-7411515737