ಶಿಕಾರಿಪುರ:ದಿ.ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ ಸಪ್ತಾಹ ಉದ್ಘಾಟನೆ

ಶಿಕಾರಿಪುರ:ದಿ.ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ ಸಪ್ತಾಹ ಉದ್ಘಾಟನೆ

ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಆಶ್ರಯದಲ್ಲಿ ನಡೆದ ಸಮಾಜವಾದಿ ನೇತಾರ ದಿ.ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ ಸಪ್ತಾಹ ಉದ್ಘಾಟನಾ ಸಮಾರಂಭ ನಡೆಯಿತು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ ಸಪ್ತಾಹ ಸಮಾರಂಭ ಉದ್ಘಾಟಿಸಿದರು.

ಕುವೆಂಪು ವಿಶ್ವವಿದ್ಯಾಲಯ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಜೆ.ಎಸ್. ಸದಾನಂದ ಮಾತನಾಡಿ, ಶಾಂತವೇರಿ ಗೋಪಾಲಗೌಡರ ಆದರ್ಶವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು,ಅವರ ಹೋರಾಟ ಯುವಪೀಳಿಗೆಗೆ ಪ್ರೇರಣೆಯಾಗಬೇಕು ಎಂದರು.

ಸಮಾಜವಾದಿ ನೇತಾರ ಶಾಂತವೇರಿ ಗೋಪಾಲ ಗೌಡರ ಹೋರಾಟ ಹಾಗೂ ಅದರ್ಶವನ್ನು ತಿಳಿಸುವ ಯುವಪೀಳಿಗೆಗೆ ತಿಳಿಸುವ ಉದ್ದೇಶದಿಂದ ಈ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್. ರಘು ಆಶಯ ನುಡಿ ನುಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಕ್ಷೇಮಾಪಾಲನಾ ಅಧಿಕಾರಿ ಆರ್.ಕೆ. ವಿನಯ್ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಕೆ.ಟಿ. ನಾಗೇಂದ್ರಪ್ಪ, ಸಹಾಯಕ ಪ್ರಾಧ್ಯಾಪಕ ಮಲ್ಲಿಕಾರ್ಜುನ್, ಉಪನ್ಯಾಸಕ ಸಕಲೇಶ್ ಹುಲ್ಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಎಂ. ನವೀನ್ ಕುಮಾರ್, ತಾಲ್ಲೂಕು ಪದಾಧಿಕಾರಿಗಳಾದ ಬಿ.ಎನ್. ಸುನೀಲ್ ಕುಮಾರ್, ಎಸ್.ಎನ್. ನರಸಿಂಹಸ್ವಾಮಿ, ಕಾಳಿಂಗರಾವ್,ವಿದ್ಯಾರ್ಥಿಗಳು ಇದ್ದರು.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!