ಶಿಕಾರಿಪುರ: ಸಂಸದ ಬಿವೈ ರಾಘವೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಬೈಕ್ ರ್ಯಾಲಿ
ಶಿಕಾರಿಪುರ ಪಟ್ಟಣದಲ್ಲಿ ಸಂಸದ ಬಿ ವೈ ರಾಘವೇಂದ್ರ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಬೈಕ್ ರ್ಯಾಲಿಯನ್ನು ನಡೆಸಿದರು.
ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಮತ್ತು ರಾಘವೇಂದ್ರ ಮಠದಲ್ಲಿ ಸಂಸದ ಬಿ ವೈ ರಾಘವೇಂದ್ರ ಕಾರ್ಯಕರ್ತರೊಂದಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.
ನಂತರ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶೇಷ ಐಸಿಯು ವಾರ್ಡ್ ಉದ್ಘಾಟನೆಯನ್ನು ನಡೆಸಿ ರೋಗಿಗಳಿಗೆ ಹಣ್ಣು,ಸಿಹಿ ವಿತರಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆಯಿಂದ ಮಂಗಳ ಭವನದ ವರೆಗೂ ಕಾರ್ಯಕರ್ತರೊಂದಿಗೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡರು.
News By: Raghu Shikari-7411515737