ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆಯಡಿ ಅರ್ಜಿ ಆಹ್ವಾನ
![ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆಯಡಿ ಅರ್ಜಿ ಆಹ್ವಾನ](https://shikarinews.com/wp-content/uploads/2022/10/kn_dept_logo1650349266.jpg)
ಶಿವಮೊಗ್ಗ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2022-23ನೇ ಸಾಲಿಗೆ ಬಸವ ಬೆಳಗು, ವಿದೇಶ ವಿದ್ಯಾವಿಕಾಸ, ಜೀವಜಲ, ಸ್ವಸಹಾಯ ಸಂಘಗಳಿಗೆ ಉತ್ತೇಜನ ಹಾಗೂ ಕಾಯಕ ಕಿರಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
![](https://shikarinews.com/wp-content/uploads/2022/10/Top-20-Franchise-Business-in-India-1024x538.jpg)
ಆಸಕ್ತರು ಅರ್ಜಿಯನ್ನು ಸೇವಾಸಿಂಧು ಪೊರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಎಲ್ಲಾ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ದಿ: 30/11/2022 ರೊಳಗಾಗಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲ ತಿಳಿಸಿರುತ್ತಾರೆ.
![](https://shikarinews.com/wp-content/uploads/2022/10/Business-Ideas.jpg)
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.kvldcl.karnataka.in, whatsapp No. – 9900012351, ದೂ.ಸಂ.: 080-22865522, ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ದೂ.ಸಂ.: 08182-229634 ನ್ನು ಸಂಪರ್ಕಿಸಲು ತಿಳಿದಿದ್ದಾರೆ.
News by Raghu Shikari-7411515737