ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆಯ್ಕೆ
![ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆಯ್ಕೆ](https://shikarinews.com/wp-content/uploads/2022/10/photo_2022-10-29_15-31-20.jpg)
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆ ಪಾಲಿಕೆಯ ಸಭಾಂಗಣದಲ್ಲಿ ನಡೆಸಲಾಗಿತ್ತು. ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಗುರುಪುರ-ಪುರಲೆ ವಾರ್ಡ್ ನ ಪಾಲಿಕೆ ಸದಸ್ಯ ಶಿವಕುಮಾರ್ ಹಾಗೂ ಮಲವಗೊಪ್ಪ ವಾರ್ಡ್ ನ ಕಾಂಗ್ರೆಸ್ ಸದಸ್ಯ ಆರ್ ಸಿ ನಾಯ್ಕ್ ಸ್ಪರ್ಧಿಸಿದ್ದರು.
![](https://shikarinews.com/wp-content/uploads/2022/10/xsmg12-1666969120.jpeg.pagespeed.ic_.0Lx1Vq-3E0.jpg)
ಉಪ ಮೇಯರ್ ಸ್ಥಾನಕ್ಕೆ ನ್ಯೂ ಮಂಡ್ಲಿ ವಾರ್ಡ್ ನ ಬಿಜೆಪಿ ಸದಸ್ಯೆ ಲಕ್ಷ್ಮೀಶಂಕರನಾಯ್ಕ್ ಹಾಗೂ ಹೊಸಮನೆ ವಾರ್ಡ್ ಸದಸ್ಯ ಕಾಂಗ್ರೆಸ್ ನ ರೇಖಾ ರಂಗನಾಥ್ ಸ್ಪರ್ಧೆ ನಡೆಸಿದ್ದರು.
![](https://shikarinews.com/wp-content/uploads/2022/10/IMG_20221023_082004_591-2.png)
ಮೇಯರ್ ಸ್ಥಾನದ ಸ್ಪರ್ಧೆಯಲ್ಲಿ ಬಿಜೆಪಿ ಶಿವಕುಮಾರ್ 26 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ನ ಆರ್ ಸಿ ನಾಯಕ್ 11 ಮತಗಳಿಂದ ಸೋಲು ಕಂಡರು. ಉಪ ಮೇಯರ್ ಚುನಾವಣೆಯಲ್ಲಿ ಲಕ್ಷ್ಮೀ 26 ಮತಗಳನ್ನು ಪಡೆದು ಗೆಲುವು ಸಾಧಿಸಿದ್ರೇ, ರೇಖಾ ರಂಗನಾಥ್ 11 ಮತ ಪಡೆದು ಸೋಲು ಕಂಡರು. ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ಶಿವಕುಮಾರ್ ಹಾಗೂ ಉಪ ಮೇಯರ್ ಆಗಿ ಲಕ್ಷ್ಮೀ ಶಂಕರನಾಯ್ಕ್ ಆಯ್ಕೆಯಾಗಿದ್ದು,ಬೆಂಬಲಿಗರು ಹಾಗೂ ಬಿಜೆಪಿ ಮುಖಂಡರು ಅಭಿನಂದನೆ ಸಲ್ಲಿಸಿದರು. ಸಿಹಿತಿಂಡಿ ವಿತರಣೆ ಮಾಡುವ ಮೂಲಕ ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ಕೆ.ಎಸ್ ಈಶ್ವರಪ್ಪ ಸೇರಿದಂತೆ ಪ್ರಮುಖರು ಇದ್ದರು.
![](https://shikarinews.com/wp-content/uploads/2022/10/IMG_20221022_171148_995.png)
News by Raghu Shikari-7411515737