ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ….!!!
![ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ….!!!](https://shikarinews.com/wp-content/uploads/2022/11/photo_2022-11-25_19-27-51.jpg)
ಿಕಾರಿಪುರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಕಾವ್ಯಕಮ್ಮಟ ಹಾಗೂ ತ್ಯಾಗರ್ತಿ ಗೌರಮ್ಮ ಸಿದ್ದಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಕೆ.ಪಿ. ಮಲ್ಲಿಕಾರ್ಜುನ್ ಉದ್ಘಾಟಿಸಿದರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷನಾದ ನಾನು ಎಚ್.ಎಸ್. ರಘು ಅಧ್ಯಕ್ಷತೆ ವಹಿಸಿದ್ದೇನು. ಕಾವ್ಯ ರಚನೆ ಕುರಿತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಡಾ.ಸೋಮಶೇಖರ ಶಿಮೊಗ್ಗಿ ಉಪನ್ಯಾಸ ನೀಡಿದರು.
![](https://shikarinews.com/wp-content/uploads/2022/11/photo_2022-11-25_19-27-53-1024x446.jpg)
ಕನ್ನಡ ಸಾಹಿತ್ಯಕ್ಕೆ ಕನಕದಾಸರ ಕೊಡುಗೆ ವಿಷಯ ಕುರಿತು ಜುಬೇದಾ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಕರಿಬಸಪ್ಪ ಉಪನ್ಯಾಸ ನೀಡಿದರು.
![](https://shikarinews.com/wp-content/uploads/2022/11/photo_2022-11-25_19-27-55-1024x594.jpg)
ಕವಯತ್ರಿ ಸುಮನಾ ಜೈನ್ ಮಾತನಾಡಿ ಕವನ ವಾಚಿಸಿದರು. ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಎಸ್. ಹುಚ್ರಾಯಪ್ಪ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಸಿ. ವೇಣುಗೋಪಾಲ್, ಕಸಾಪ ಪದಾಧಿಕಾರಿಗಳಾದ ಶುಭ ರಘು, ನಂದಾಪ್ರೇಮ್ ಕುಮಾರ್, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾದ ಕೆ.ಎಚ್. ಪುಟ್ಟಪ್ಪ, ರವಿಕುಮಾರ್, ಜುಬೇದಾ ಕಾಲೇಜು ಗ್ರಂಥಪಾಲಕ ನಾಗರಾಜ್ ಉಪಸ್ಥಿತರಿದ್ದರು.
News By Raghu Shikari-7411515737