ಶೀಘ್ರವಾಗಿ ಶಿವಮೊಗ್ಗದಲ್ಲಿ ಸೈನ್ಸ್ ಸೆಂಟರ್ ನಿರ್ಮಾಣ : ಬಿ. ವೈ ರಾಘವೇಂದ್ರ
ಶಿಕಾರಿಪುರ : ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕ್ಯಾಂಪಸ್ ನಲ್ಲಿ ಬಿ ಕೆಟಗರಿಯ 16 ರಿಂದ 20 ಕೋಟಿಯ ವೆಚ್ಚದಲ್ಲಿ ಸೈನ್ಸ್ ಸೆಂಟರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ ಬಂದಿದೆ, ಇದರಿಂದ ನಮ್ಮ ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ನೂತನ ಪ್ರಯೋಗಾಲಯ ಸಹಕಾರಿಯಾಗಲಿದೆ, ಈ ರೀತಿಯ ಕೊಡುಗೆಯನ್ನು ನಮ್ಮ ಕೇಂದ್ರ ಸರ್ಕಾರ ಶಿವಮೊಗ್ಗಕ್ಕೆ ನೀಡಿದೆ ಎಂದು ಸಂಸದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.
ಭಾರತ ಸರ್ಕಾರದ ಅಟಲ್ ಇನ್ನೋವೇಶನ್ ಮಿಷನ್, ನೀತಿ ಆಯೋಗದ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಮತ್ತು ಕುಮದ್ವತಿ ಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಅನ್ನು ಸಂಸದ ಬಿ. ವೈ ರಾಘವೇಂದ್ರ ಉದ್ಘಾಟಸಿ ಮಾತನಾಡಿದರು
ಕಾರ್ಯಕ್ರಮದಲ್ಲಿ ಡಿಡಿಪಿಐ ಬಸವರಾಜಪ್ಪ, ಶಿಕಾರಿಪುರ ಶಿಕ್ಷಣಾಧಿಕಾರಿ ಶಶಿಧರ್, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್, ಶಿವಮೊಗ್ಗ ಡಿಐಇಟಿ ಅಸುಂತಾ, ಹೊಂಗಿರಣ ಪಿಯು ಕಾಲೇಜಿನ ಪ್ರಾಂಶುಪಾಲ ರೋಹಿತ್, ಕುಮದ್ವತಿ ಕಾಲೇಜಿನ ಪ್ರಾಂಶುಪಾಲ ಡಾ. ಶಿವಕುಮಾರ್ ಜಿ.ಎಸ್. ಮುಖ್ಯ ಶಿಕ್ಷಕ ದಯಾನಂದ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
News by Raghu shikari-7411515737