3 ಹಸುಗಳನ್ನು ಬೇಟೆಯಾಡಿ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ…!!!!

3 ಹಸುಗಳನ್ನು ಬೇಟೆಯಾಡಿ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ…!!!!

ಶಿವಮೊಗ್ಗ: ಸುಮಾರು 15 ದಿನಗಳ ಹಿಂದೆ 3 ಹಸುಗಳನ್ನ‌ ಭೇಟೆಯಾಡಿದ್ದ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಬೋನಿನಲ್ಲಿ ಸೆರೆ ಹಿಡಿಯಲಾಗಿದೆ.

ತಾಲೂಕಿನ  ಹರಮಘಟ್ಟ ಗ್ರಾಮದಲ್ಲಿ ಚಿರತೆಯೊಂದು ಬಲೆಯಾಕಿ ಬೋನಿಗೆ ಬಿಳಿಸಿದ್ದು ಚಿರತೆಯನ್ನ ಹಿಡಿಯಲಾಗಿದೆ.

ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಈ ಹಿಂದೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು ಇದರ ಬೆನ್ನಲ್ಲೆ ಹರಮಘಟ್ಟದ 200 ಮೀಟರ್ ವ್ಯಾಪ್ತಿಯಲ್ಲಿ ಬೋನು ಇಟ್ಟು ಅದರಲ್ಲಿ ನಾಯಿಯನ್ನ ಇಡಲಾಗಿತ್ತು. ಇಂದು ಬೆಳಿಗ್ಗೆ ಚಿರತೆ ಬೋನಿಗೆ ಬಿದ್ದಿದ್ದು,ಗಂಡು ಚಿರತೆ ಎಂದು ಗುರುತಿಸಲಾಗಿದೆ. ಚಿರತೆಯನ್ನ ಊರಿನ‌ ಅಗಸೆ ಬಾಗಿಲಿಗೆ ತಂದಿರಿಸಲಾಗಿದೆ.

ಚಿರತೆ ನೋಡಲು ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಜನ ಗುಂಪು ಗುಂಪಾಗಿ  ಆಗಮಿಸುತ್ತಿದ್ದಾರೆ. ಅರಣ್ಯ ಇಲಾಖೆಯವರು ಸ್ಥಳಕ್ಕೆ ದಾವಿಸಿದ್ದಾರೆ. ಚಿರತೆಯನ್ನ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿ ನಂತರ ಸ್ಥಳಾಂತರ ಮಾಡುವ ನಿರೀಕ್ಷೆಯಿದೆ.

News by Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!