ಸವಳಂಗ ರಸ್ತೆಯಲ್ಲಿ ಭೀಕರ ಅಪಘಾತ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೆ ಸಾವು….!
![ಸವಳಂಗ ರಸ್ತೆಯಲ್ಲಿ ಭೀಕರ ಅಪಘಾತ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೆ ಸಾವು….!](https://shikarinews.com/wp-content/uploads/2022/12/20221211_092507.jpg)
ಶಿವಮೊಗ್ಗ: ಸವಳಂಗ ರಸ್ತೆಯಲ್ಲಿ ಕಾರು-ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಕಲ್ಲಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಮೃತರನ್ನು ದಾವಣಗೆರೆ ಅವರಗೆರೆಯ ವಿವೇಕ, ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಾದ ಕಾರ್ತಿಕ್, ಮೋಹನ್ ಎಂದು ಗುರುತಿಸಲಾಗಿದೆ. ದಾವಣಗೆರೆ ಜಯನಗರದ ನಿವಾಸಿ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ರುದ್ರೇಶ್ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದಾನೆ.
![](https://shikarinews.com/wp-content/uploads/2022/12/20221211_092934-1024x576.jpg)
ಲಾರಿ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದೆ. ಲಾರಿಗೆ ಡಿಕ್ಕಿಯಾದ ಬಳಿಕ ಕಾರು ರಸ್ತೆ ಬದಿಗೆ ಹೋಗಿ ತಗ್ಗಿನಲ್ಲಿ ನಿಂತಿದೆ. ಗಾಯಗೊಂಡಿದ್ದ ವಿವೇಕ, ಕಾರ್ತಿಕ್ ಮತ್ತು ಮೋಹನ್ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಹಿಂಬದಿ ಸೀಟಿನಲ್ಲಿದ್ದ ರುದ್ರೇಶ್ ಗಂಭೀರ ಗಾಯಗೊಂಡಿದ್ದು ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ಮಾಹಿತಿ ಬರಬೇಕಿದೆ.
News by Raghu shikari-7411515737