ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಲ್ಲಿ ಭಾಗವಹಿಸಿವರು ಜಿಲ್ಲಾಡಳಿತದ ಹೊರಡಿಸಿರುವ ರೂಲ್ಸ್ ನೋಡಿ……!!!

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಲ್ಲಿ ಭಾಗವಹಿಸಿವರು ಜಿಲ್ಲಾಡಳಿತದ ಹೊರಡಿಸಿರುವ ರೂಲ್ಸ್ ನೋಡಿ……!!!

ಶಿವಮೊಗ್ಗದ ಹೊಸದಾಗಿ ನಿರ್ಮಾಣವಾದ ವಿಮಾನ ನಿಲ್ದಾಣದಲ್ಲಿ ಸಭಾ ಕಾರ್ಯಕ್ರಮ ಇರುವುದರಿಂದ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದೊಂದಿಗೆ ಹಲವು ಸರ್ಕಾರಿ ಯೋಜನೆಗಳು/ಕಾರ್ಯಕ್ರಮಗಳು ಉದ್ಘಾಟನೆ ಗೊಳ್ಳಲ್ಲಿದೆ.

ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಕಡ್ಡಾಯ ಸೂಚನೆ ಹೊರಡಿಸಿದೆ.

ಏನೇನು ಸೂಚನೆ ಪಾಲಿಸಬೇಕು?
ಬೆಳಿಗ್ಗೆ 10 ಗಂಟೆಯೊಳಗೆ ಗೇಟ್ ಮುಚ್ಚಲಿದ್ದು 10 ಗಂಟೆಯೊಳಗೆ ಸಾರ್ವಜನಿಕರು ಆಗಮಿಸಬೇಕೆಂದು ಸೂಚಿಸಿದೆ.
ನೀರಿನ ಬಾಟಲಿ, ಬ್ಯಾಗ್, ಪೇಪರ್ , ಪೆನ್, ಕಪ್ಪು ಬಣ್ಣದ ಬಟ್ಟೆ / ಶರ್ಟ್ / ಕರವಸ್ತ್ರಗಳು, ಇತರೆ ವಸ್ತು ತರುವಂತಿಲ್ಲ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬದಲಿ ಮಾರ್ಗದ ವ್ಯವಸ್ಥೆ
ಸುಗಮ ಸಂಚಾರ ಹಾಗೂ  ಸಂಚಾರ ನಿಯಂತ್ರಣದ ಹಿನ್ನೆಲೆ ವಾಹನಗಳಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗುತ್ತದೆ. ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಮತ್ತು ವಾಹನಗಳನ್ನು ಹೊರತು ಪಡಿಸಿ ಉಳಿದ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಬೇಕು.
ಇತರೆ ಕೆ.ಎಸ್.ಆರ್.ಟಿ.ಸಿ, ಖಾಸಗಿ ಬಸ್ ಗಳು ಮತ್ತು ಇತರೆ ಯಾವುದೇ ವಾಹಾನಗಳಲ್ಲಿ ಪ್ರಯಾಣ ಬೆಳಸುವ ಪ್ರಯಾಣಿಕರು,  ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆಯನ್ನು ಹೊರತು ಪಡಿಸಿ, ಬದಲಿ ಮಾರ್ಗದಲ್ಲಿಯೇ ಪ್ರಯಾಣಿಸಬೇಕು ಎಂದು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

News by Raghu Shikari -7411515737

Admin

Leave a Reply

Your email address will not be published. Required fields are marked *

error: Content is protected !!