ಬಿವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆ ಅದ್ದೂರಿ ರೋಡ್ ಶೋ..!

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ ಅವರು ಬುಧವಾರ ಬೆಳಗ್ಗ ಎರಡನೇ ಬಾರಿ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಪಟ್ಟಣದ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ‌ನೀಡಿ ನಂತರ ತಾಲೂಕು ಕಚೇರಿಯಲ್ಲಿರುವ ಚುನಾವಣಾ ಅಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಅದ್ದೂರಿ ರೋಡ್ ಶೋ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನವರ ನೇತೃತ್ವದಲ್ಲಿ ಪಟ್ಟದ ಹುಚ್ಚರಾಯಸ್ವಾಮಿ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಅದ್ದೂರಿ ರೋಡ್ ಶೋ ನಡೆಸಲಾಯಿತು.

ಸಾವಿರಾರೂ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು.

ಅನೇಕ ವಾದ್ಯಗಳೊಂದಿಗೆ ಬಿಜೆಪಿ ಬಾವುಟ ಶಾಲು ಟೋಪಿ ಧರಸಿ ಬಿಜೆಪಿ ಪಕ್ಷಕ್ಕೆ ಬಿ.ಎಸ್ ಯಡಿಯೂರಪ್ಪನವರಿಗೆ ವಿಜಯೇಂದ್ರಗೆ ಅವರಿಗೆ ಜೈಕಾರ ಕೂಗಿದರು‌.

ಈ ಸಂದರ್ಭದಲ್ಲಿ ಸಚಿವ ಎಂ ಟಿಬಿ ನಾಗರಾಜ್, ಅರಗ ಜ್ಞಾನೇಂದ್ರ, ಸಂಸದ ಉಮೇಶ್ ಜಾಧವ್, ರಾಜುಗೌಡ, ರುದ್ರೆಗೌಡ,ಭಾರತಿ ಶೇಟ್ಟಿ, ಬಳಿಗಾರ್,ಶೃತಿ, ಕೆಎಸ್ ಗುರುಮೂರ್ತಿ,ಪದ್ಮನಾಭ ಭಟ್, ಇದ್ದರು‌.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!