130ಕ್ಕೂ ಅಧಿಕ ಕ್ಷೇತ್ರದಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರಲಿದೆ: ಬಿ ವೈ ವಿಜಯೇಂದ್ರ
ಶಿಕಾರಿಪುರ :ದೇಶದ ಅಭಿವೃದ್ಧಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ರಾಜ್ಯದಲ್ಲಿ ಬಿ ಎಸ್ ಯಡಿಯೂರಪ್ಪನವರ ಸಿಎಂ ಬಸವರಾಜ್ ಬೊಮ್ಮಾಯಿರವರು ಜನತೆಗೆ ನೀಡಿದ ಉತ್ತಮ ಕಾರ್ಯಕ್ರಮದಡಿ ರಾಜ್ಯದಲ್ಲಿ ಮತ್ತೆ ಈ ಬಾರಿ ಬಿಜೆಪಿ ಪಕ್ಷವು 130 ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿಯಲಿದೆ ಎಂದು ರಾಜ್ಯ ಬಿಜೆಪಿ ಉಪಾದ್ಯಕ್ಷ ಬಿವೈ ವಿಜಯೇಂದ್ರ ವಿಶ್ವಾಸ ವ್ಯಕ್ತ ಪಡಿಸಿದರು.
ಪಟ್ಟಣದ ಬಿಜೆಪಿ ಪಕ್ಷದ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿಧಾನಸಭಾ ಚುನಾವಣೆ ಪೋಷಣೆಯಾಗುತ್ತಿದ್ದಂತೆ ತಾಲ್ಲೂಕಿನಲ್ಲಿ ಸಂಸದರಾದ ಬಿ ವೈ ರಾಘವೇಂದ್ರ ಹಿರಿಯರಾದ ಗುರುಮೂರ್ತಿ, ತಾಲ್ಲೂಕು ಬಿಜೆಪಿ ಅದ್ಯಕ್ಷ ವಿರೇಂದ್ರ ಪಾಟೀಲ್ ಸೇರಿದಂತೆ ಪಕ್ಷದ ಅನೇಕ ಕಾರ್ಯಕರ್ತರು ಈಗಾಗಲೇ ಎರಡು ಹಂತದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದು, ದಿನಾಂಕ 27 ರ ಗುರುವಾರದಂದು ರಾಷ್ಟ್ರೀಯ ಅದ್ಯಕ್ಷ ಜೆ ಪಿ ನಡ್ಡಾರವರು ಶಿರಾಳಕೊಪ್ಪಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಐಟಿಐ ಕಾಲೇಜಿನ ಆವರಣದಲ್ಲಿ ಬೃಹತ್ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ನಾನು ಶಾಸಕನಾದ ಮೇಲೆ 20 ದಿನ ಕ್ಷೇತ್ರದಲ್ಲಿ ಇರುತ್ತೇನೆ. ಜನ ಸಂಪರ್ಕ ನಡೆಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಈಗಾಗಲೇ ತಾಲ್ಲೂಕಿನ ಸಂಡ ಗ್ರಾಮದಲ್ಲಿ 150 ಎಕ್ಕರೆ ಜಾಗದಲ್ಲಿ ಪಶು ಆಹಾರ ಘಟಕದ ಕಾರ್ಖಾನೆ ನಿರ್ಮಾಣವಾಗಿದ್ದು, ಅದೇರೀತಿ ಶಿವಮೊಗ್ಗ ರಸ್ತೆಯಲ್ಲಿ ಶಾಹಿ ಗಾರ್ಮೆಂಟ್ ತೆರೆಯಲಾಗಿದೆ.
ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಖಾನೆ ತಂದು ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಲು ಶ್ರಮಿಸುತ್ತೇನೆ. ತಾಲ್ಲೂಕಿನಾದ್ಯಂತ ಅತಿ ಹೆಚ್ಚು ಕೊಳವೆ ಬಾವಿಗಳಿದ್ದು, ಇವುಗಳಿಗೆ. ಇನ್ನೂ ಹೆಚ್ಚು ವಿದ್ಯುತ್ ಸ್ಥಾವರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಬಗರ್ಹುಕುಂ ಸಾಗುವಳಿದಾರರಿಗೆ ಬಿಎಸ್ ವೈ ರೀತಿ ಬದ್ದತೆ ಇಟ್ಟುಕೊಂಡು ಕೆಲಸ ಮಾಡುತ್ತೆನೆ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ.
ತಾಲ್ಲೂಕಿನಲ್ಲಿ ಬಿ ಎಸ್ ಯಡಿಯೂರಪ್ಪರವರ ಹಾಗೂ ಸಂಸದರಾದ ಬಿ ವೈ ರಾಘವೇಂದ್ರರವರು ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿ ಅವರ ಪರಿಶ್ರಮದ ಫಲವಾಗಿ, ಕೇಂದ್ರದಲ್ಲಿ ನರೇಂದ್ರ ಮೋದಿಯವರ ಉತ್ತಮ ಆಡಳಿತದ ಪಲವಾಗಿ ನಾನು ಈ ಕ್ಷೇತ್ರದಲ್ಲಿ ಐವತ್ತು ಸಾವಿರಕ್ಕಿಂತಲೂ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸುತ್ತೇನಲ್ಲದೇ, ರಾಜ್ಯದಲ್ಲಿ 130 ಕ್ಕೂ ಅಧಿಕ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿ ನಿಚ್ಚಳ ಬಹುಮತದಿಂದ ಅಧಿಕಾರ ಹಿಡಿಯುತ್ತೇವೆ ಎಂದು ವಿಶ್ಶಾಸ ವ್ಯಕ್ತಪಡಿಸಿದರು .
ಉತ್ತರಘಂಡ್ ಮಾಜಿ ಸಚಿವ ಶಾಸಕ ಖಜಾನ್ ದಾಸ್
ಎಂಎಡಿಬಿ ಅಧ್ಯಕ್ಷ ಕೆ ಎಸ್ ಗುರುಮೂರ್ತಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ಬಿಜೆಪಿ ಮುಖಂಡರಾದ ಕಬಾಡಿ ರಾಜು, ಕೆ ಹಾಲಪ್ಪ, ಟಿ ಎಸ್ ಮೋಹನ್. ಚೆನ್ನವೀರಪ್ಪ, ರಾಮಾನಾಯ್ಕ್, ಪ್ರವೀಣ್ ಸೇರಿದಂತೆ ಅನೇಕರು ಇದ್ದರು
News by: Raghu Shikari-7411515737