ಗಾಜನೂರು ಬಳಿ ಬಸ್ -ಕಾರು ನಡುವೆ ಅಪಘಾತ ಒಬ್ಬರಿಗೆ ಗಂಭೀರ ಗಾಯ..!

ಗಾಜನೂರು ಬಳಿ ಬಸ್ -ಕಾರು ನಡುವೆ ಅಪಘಾತ ಒಬ್ಬರಿಗೆ ಗಂಭೀರ ಗಾಯ..!

ಶಿವಮೊಗ್ಗ : ಗಾಜನೂರು ಸಮೀಪ ಕಾರು ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿವೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಮಧ್ಯೆ ಅಪಘಾತವಾಗಿದೆ.

ಗಾಜನೂರಿನ ಮೊರಾರ್ಜಿ ಶಾಲೆ ಬಳಿ ಓವರ್‌ ಟೇಕ್‌ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.

ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೂವರಿಗೆ ಸಣ್ಣಪುಟ್ಟ ಗಾಯವಾಗಿದೆ. ಎಲ್ಲರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

News by: ಅಕ್ಷಯ್ ತೀರ್ಥಹಳ್ಳಿ

Admin

Leave a Reply

Your email address will not be published. Required fields are marked *

error: Content is protected !!