ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ – ಓರ್ವನ ಸ್ಥಿತಿ ಗಂಭೀರ
![ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ – ಓರ್ವನ ಸ್ಥಿತಿ ಗಂಭೀರ](https://shikarinews.com/wp-content/uploads/2023/07/IMG-20230719-WA0011.jpg)
ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ರ ತೀರ್ಥಹಳ್ಳಿ – ಶೃಂಗೇರಿಯ ರಸ್ತೆಯ ಮೇಲಿನಕುರುವಳ್ಳಿ ಸಮೀಪದ ಕುಂಬಾರದಡಿಗೆ ಬಳಿ ನಿಂತಿದ್ದ ಕ್ಯಾಂಟರ್ ವೊಂದಕ್ಕೆ ಓಮಿನಿ ಕಾರು ಡಿಕ್ಕಿ ಹೊಡೆದಿದ್ದು ಚಾಲಕನ ಸ್ಥಿತಿ ಗಂಭೀರವಾಗಿದೆ.
ಅತೀ ವೇಗದಲ್ಲಿ ಇದ್ದ ಓಮಿನಿ ಕಾರು ನಿಂತಿದ್ದ ಕ್ಯಾಂಟರ್ ಗೆ ಗುದ್ದಿದ್ದು ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನ ಚಾಲಕನ ಸ್ಥಿತಿ ಗಂಭೀರವಾಗಿದ್ದು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.