ಶಿವಮೊಗ್ಗ: ಪುರಾಣ ಪ್ರಸಿದ್ಧ ಚಂದ್ರಗುತ್ತಿ ದೇವಾಲಯ ವಿರೂಪ ಗೊಳಿಸಿದ ದುಷ್ಕರ್ಮಿಗಳು
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯ ಬಾಗಿಲು ಒಡೆದು ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿದ ಕಿಡಿಗಾಡಿಗಳು
ದೇವಾಲಯದ ಗರ್ಭಗುಡಿಯಲ್ಲಿ ಇರುವ ಮೂಲ ದೇವರ ಬೆಳ್ಳಿಯ ಹೊದಿಕೆಯನ್ನು ಹೊರ ಎಸೆದಿದ್ದಾರೆ.
ದೇವಾಲಯದಲ್ಲಿರುವ ಹುಂಡಿ ಹಾಗೂ ಪೂಜಾ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿ ಗೊಳಿಸಿದ ದೇವರ ಬೆಳ್ಳಿ ಮುಖವಾಡವನ್ನು ಗರ್ಭಗುಡಿಯಿಂದ ದೇವಸ್ಥಾನದ ಹೊರಗಡೆ ವರಂಡದಲ್ಲಿ ಎಸೆದಿದ್ದಾರೆ ಕಳ್ಳತನ ಮಾಡುವ ಉದ್ದೇಶವಿರಬಹುದೆಂದು ಎಂದು ಗ್ರಾಮಸ್ಥರು ಶಂಕಿಸಿದ್ದಾರೆ.
ದೇವಸ್ಥಾನದ ಕೆಳಭಾಗದಲ್ಲಿರುವ ತ್ರಿಶೂಲ ಭೈರವೇಶ್ವರ ದೇವಸ್ಥಾನಕ್ಕೂ ನುಗ್ಗಿ ಕಳ್ಳತನಕ್ಕೆ ಯತ್ನ ಮಾಡಿ ಸ್ಥಳಕ್ಕೆ ಭೇಟಿ ಸೊರಬ ತಹಶಿಲ್ದಾರ್ ಪೋಲಿಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.