ಶಿಕಾರಿಪುರ ಪಟ್ಟಣದ ಆಡಳಿತ ಸೌಧ ಕಟ್ಟಡದಲ್ಲಿ ಶಾಸಕರ ಕಛೇರಿಯ ಉದ್ಘಾಟನೆ

ಶಿಕಾರಿಪುರ ಪಟ್ಟಣದ ಆಡಳಿತ ಸೌಧ ಕಟ್ಟಡದಲ್ಲಿ ಶಾಸಕರ ಕಛೇರಿಯ ಉದ್ಘಾಟನೆ

ಶಿಕಾರಿಪುರ ತಾಲೂಕಿನ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯನ್ನು ಅಧಿಕೃತವಾಗಿ ಪಟ್ಟಣದ ಆಡಳಿತ ಸೌಧದ ಕಟ್ಟಡದಲ್ಲಿ ಶುಕ್ರವಾರ ಬೆಳಗ್ಗೆ ಉದ್ಘಾಟನೆ ನಡೆಸಲಾಯಿತು.

ನೂತನ ಶಾಸಕರಾದ ಬಿ ವೈ ವಿಜಯೇಂದ್ರ ಅವರು ತಾಲೂಕಿನ ಸಾರ್ವಜನಿಕರ ಅವಹಾಲುಗಳನ್ನು ಮತ್ತು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನೂತನ ಶಾಸಕರ ಕಚೇರಿಯನ್ನು ತೆರೆಯಲಾಗಿದೆ‌ ಎಂದು ತಿಳಿಸಿದರು.

ತಾಲೂಕಿನ ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆ ಇದ್ದರೂ ಕಚೇರಿಗೆ ಆಗಮಿಸಿ ಮನವಿ ಮಾಡಿದರೆ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮವನ್ನು ಕೈಗೊಳ್ಳಲಾಗುತ್ತದೆ ತಾಲೂಕಿನ ಜನತೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ಬಿ ವೈ ವಿಜಯೇಂದ್ರ ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಎಂಐಡಿಬಿ ಮಾಜಿ ಅಧ್ಯಕ್ಷರಾದ ಕೆಎಚ್ ಗುರುಮೂರ್ತಿ, ತಾಲೂಕು ಬಿಜೆಪಿಯ ಅನೇಕ ಮುಖಂಡರು ಕಾರ್ಯಕರ್ತರು ಇದ್ದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!