ಸಾವಿರಾರು ಎಕರೆ ಭೂಮಿಯನ್ನ ಅಕ್ರಮವಾಗಿ ಮಂಜೂರು ಮಾಡಿದ್ದ ತಹಶಿಲ್ದಾರ್ ಬಂಧನ
![ಸಾವಿರಾರು ಎಕರೆ ಭೂಮಿಯನ್ನ ಅಕ್ರಮವಾಗಿ ಮಂಜೂರು ಮಾಡಿದ್ದ ತಹಶಿಲ್ದಾರ್ ಬಂಧನ](https://shikarinews.com/wp-content/uploads/2023/08/IMG_20230825_152702.jpg)
ಚಿಕ್ಕಮಗಳೂರು: ಸಾವಿರಾರು ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ ಆರೋಪದ ಮೇಲೆ ತಹಸಿಲ್ದಾರೊಬ್ಬರು ಬಂಧನವಾಗಿದ್ದಾರೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಿಂದಿನ ತಹಶೀಲ್ದಾರ್ ಉಮೇಶ್ ಬಂಧನವಾಗಿರುವ ಅಧಿಕಾರಿ ಕಡೂರು ಪೊಲೀಸರಿಂದ ಬೆಂಗಳೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.
![](https://shikarinews.com/wp-content/uploads/2023/08/IMG-20230825-WA0007-1024x785.jpg)
ಕಡೂರು ತಾಲೂಕು ವ್ಯಾಪ್ತಿಯಲ್ಲಿ ಸಾವಿರಾರು ಎಕರೆ ಭೂಮಿಯನ್ನು ಸೇರಿ ಅಕ್ರಮವಾಗಿ ಮೀಸಲು ಅರಣ್ಯವನ್ನು 8 ಜನರಿಗೆ ಪರಭಾರೆ ಮಾಡಿದರು ಕಡೂರಿನಲ್ಲಿ 3500 ಎಕರೆ ಭೂಮಿಯನ್ನ ಅಕ್ರಮವಾಗಿ ಮಂಜೂರು ಮಾಡಿದ್ದರು ಎನ್ನಲಾಗಿದೆ.
ಪ್ರಸ್ತುತ ಪ್ರಮೋಷನ್ ಆಗಿ ಕಾರವಾರ ಸೀಬರ್ಡ್ ನೌಕನೆಲೆಯಲ್ಲಿ ಭೂಸ್ವಾಧೀನ ಅಧಿಕಾರಿಯಾಗಿದ್ದರು
ಈ ಪ್ರಕರಣ ಸಂಬಂಧಿಸಿದಂತೆ ತನಿಖೆಗೆ 15 ತಹಶೀಲ್ದಾರ್ ಗಳ ತಂಡವನ್ನ ರಚಿಸಲಾಗಿತ್ತು.
ಈ ಪ್ರಕರಣ ಕುರಿತು ಕಡೂರು ಠಾಣೆಯಲ್ಲಿ ಉಮೇಶ್ ಸೇರಿ ಮೂವರ ವಿರುದ್ಧ ಕೇಸ್ ದಾಖಲಾಗಿತ್ತು ಇಂದು ಬೆಂಗಳೂರಿನಲ್ಲಿ ಕಡೂರು ಪೊಲೀಸರಿಂದ ಉಮೇಶ್ ಬಂಧನವಾಗಿದೆ.
News by: Santhosh Chikamagaluru