ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವಿರೋಧ: ಪ್ರತಿಭಟನಾ ಸ್ಥಳಕ್ಕೆ ಗೋಮುತ್ರ ಸಿಂಪಡಣೆ..!

ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವಿರೋಧ: ಪ್ರತಿಭಟನಾ ಸ್ಥಳಕ್ಕೆ ಗೋಮುತ್ರ ಸಿಂಪಡಣೆ..!

ಶಿವಮೊಗ್ಗ: ನಮೋ ಬ್ರಿಗೇಡ್ ವತಿಯಿಂದ ಕರ್ನಾಟಕ ಸಂಘದಲ್ಲಿ ಆಯೋಜಿಸಲಾಗಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸವನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪರವಿರೋಧ ವಾಗ್ವಾದಗಳು ನಡೆದವು.

ಇನ್ನು ಮಲಗಿದರೆ ಏಳುವಾಗ ಭಾರತ ಇರುವುದಿಲ್ಲ ಎಂಬ ವಿಚಾರದ ಕುರಿತಾಗಿ ನಮೋ ಬ್ರಿಗೇಡ್ ವತಿಯಿಂದ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸವನ್ನು ಇಂದು ಸಂಜೆ ಆಯೋಜಿಸಲಾಗಿತ್ತು. ಆದರೆ, ಇದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಕರ್ನಾಟಕ ಸಂಘದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತೆಯರೂ ಸಹ ಪಾಲ್ಗೊಂಡಿದ್ದರು. ದ್ವೇಷದ ಭಾಷಣ ಮಾಡುವ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾನಸಕ್ಕೆ ಅವಕಾಶ ನೀಡುವುದಿಲ್ಲ ಎಂದು ಪೊರಕೆಗಳನ್ನು ಹಿಡಿದು ಪುರುಷ ಹಾಗೂ ಮಹಿಳಾ ಕಾರ್ಯಕರ್ತೆರು ಘೋಷಣೆಗಳನ್ನು ಕೂಗಿದರು.

ಇನ್ನು, ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಪ್ರತಿಭಟ ನಡೆಸಿದರು. ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಬೆಂಬಲ ವ್ಯಕ್ತಪಡಿಸಿ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು ಮೋದಿ…ಮೋದಿ…ಮೋದಿ… ಜೈ ಶ್ರೀರಾಮ್ ಘೋಷಣೆ ಕೂಗಿದರು.

ಗೋಮೂತ್ರ ಸಿಂಪಡನೆ
ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದ ಬಿಎಚ್ ರಸ್ತೆಯ ಸ್ಥಳದಲ್ಲಿ ಹಿಂದೂ ಕಾರ್ಯಕರ್ತರು ಗೋಮೂತ್ರ ಸಿಂಪಡನೆ ಮಾಡಿ ಶುದ್ಧೀಕರಣ ಮಾಡಿದರು.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!