ಚಕ್ರವರ್ತಿ ಸೂಲಿಬೆಲೆಗೆ ಪೊಲೀಸ್ ನೋಟಿಸ್ ಕಾರ್ಯಕರ್ತರ ಪ್ರತಿಭಟನೆ..!
![ಚಕ್ರವರ್ತಿ ಸೂಲಿಬೆಲೆಗೆ ಪೊಲೀಸ್ ನೋಟಿಸ್ ಕಾರ್ಯಕರ್ತರ ಪ್ರತಿಭಟನೆ..!](https://shikarinews.com/wp-content/uploads/2023/08/IMG-20230830-WA0131.jpg)
ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ಒಂದು ದಾಖಲಾಗಿದ್ದು ಇದರ ಸಂಬಂಧ ಪೊಲೀಸ್ ನೋಟಿಸ್ ನೀಡಲಾಗಿದೆ ಈ ವಿಷಯಕ್ಕೆ ಠಾಣೆಗೆ ಚಕ್ರವರ್ತಿ ಸೂಲಿಬೆಲೆ ಹಾಜರಾಗಿದ್ದು ಕಾರ್ಯಕರ್ತರು ಠಾಣೆ ಎದುರು ಪ್ರತಿಭಟನೆಯನ್ನು ನಡೆಸಿದ್ದಾರೆ.
![](https://shikarinews.com/wp-content/uploads/2023/08/IMG-20230830-WA0130-1024x768.jpg)
ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ರಾಜ್ಯ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೌಗಂಧಿಕಾ ರಘುನಾಥ್ ಅವರು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲಿಸಿದ್ದರು.
![](https://shikarinews.com/wp-content/uploads/2023/08/IMG_20230830_22015575.jpg)
ಈ ಪ್ರಕರಣ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ಅವರಿಗೆ ವಿನೋಬನಗರ ಠಾಣೆ ಪೊಲೀಸರು ನೋಟಿಸ್ ನೀಡಿದ್ದರು ಈ ಸಂಬಂಧ ಚಕ್ರವರ್ತಿ ಸೂಲಿಬೆಲೆ ಅವರು ಠಾಣೆಗೆ ಹಾಜರಾಗಿದ್ದು ಈ ವೇಳೆ ಚಕ್ರವರ್ತಿ ಸೂಲಿಬೆಲೆ ಅವರ ನೂರಾರು ಬೆಂಬಲಿಗರು ಠಾಣೆ ಎದುರು ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುವ ಮೂಲಕ ಪ್ರತಿಭಟನೆಯನ್ನು ನಡೆಸಿದರು.
![](https://shikarinews.com/wp-content/uploads/2023/08/IMG-20230830-WA0131-1024x684.jpg)
ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಹಾಗೂ ಬಿಜೆಪಿ ಮುಖಂಡರುಗಳು ಯುವ ಬ್ರಿಗೇಡ್ ಕಾರ್ಯಕರ್ತರು ಇದ್ದರು.
News by: Raghu Shikari-7411515737