ಶಿಕಾರಿಪುರ: ಕಾವೇರಿ ವಿವಾದ ಕೇಂದ್ರ ಸರ್ಕಾರ ಮಧ್ಯಸ್ಥಿಕೆಗೆ ಜಯ ಕರ್ನಾಟಕ ಜನಪರ ವೇದಿಕೆ ಒತ್ತಾಯ..!

ಶಿಕಾರಿಪುರ: ಕಾವೇರಿ ವಿವಾದ ಕೇಂದ್ರ ಸರ್ಕಾರ ಮಧ್ಯಸ್ಥಿಕೆಗೆ ಜಯ ಕರ್ನಾಟಕ ಜನಪರ ವೇದಿಕೆ ಒತ್ತಾಯ..!

ಶಿಕಾರಿಪುರ ಪಟ್ಟಣದ ತಾಲೂಕು ಕಚೇರಿ ಎದುರು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಕಾವೇರಿ ವಿವಾದ ಕುರಿತು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ತಾಲೂಕು ಅಧ್ಯಕ್ಷ ಶಿವಯ್ಯ ಮಾತನಾಡಿ ಪ್ರಧಾನಮಂತ್ರಿಗಳು ಕೂಡಲೇ ಕಾವೇರಿ ನದಿ ನೀರಿನ ಹಂಚಿಕೆ ಸಮಸ್ಯೆಯನ್ನು ಸರಿಪಡಿಸಲು ತಜ್ಞರಾ ತಂಡವನ್ನು ಖುದ್ದಾಗಿ ಕೆ ಆರ್ ಎಸ್ ಡ್ಯಾಮ್ ನಲ್ಲಿ ಶೇಖರವಾಗಿರುವ ನೀರನ್ನು ಪರಿಶೀಲಿಸಿ ಕರ್ನಾಟಕಕ್ಕೆ ಅನ್ಯಾಯವಾಗದಂತೆ ನ್ಯಾಯ ಒದಗಿಸಬೇಕು ಕಾವೇರಿ ನೀರಿನ ವಿಷಯವಾಗಿ ಎಲ್ಲಾ ಪಕ್ಷದ ಸಂಸದರು ಪಕ್ಷಭೇದ ಮರೆತು ಒಟ್ಟಾಗಿ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಕೇಂದ್ರಕ್ಕೆ ಎಚ್ಚರಿಕೆಯನ್ನು ನೀಡಬೇಕು ಎಂದರು.

ಈ ವೇಳೆ ತಹಶೀಲ್ದಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಯ‌ ಕರ್ನಾಟಕ ಜನಪರ ವೇದಿಕೆಯ ಇಮ್ರನ್, ಮಾಲತೇಶ್, ಮುಕ್ತಿಯರ್, ಹರೀಶ್, ನವೀನ್,ನಾಗರಾಜ್ ,ಜಾಫರ್ ,ಪುನೀತ್ ಇದ್ದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!