ಸಂಸದ ಬಿ ವೈ ರಾಘವೇಂದ್ರ ನೇತೃತ್ವದಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ..!
![ಸಂಸದ ಬಿ ವೈ ರಾಘವೇಂದ್ರ ನೇತೃತ್ವದಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ..!](https://shikarinews.com/wp-content/uploads/2023/11/IMG-20231118-WA0038.jpg)
ಶಿಕಾರಿಪುರ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಸಂಸದ ಬಿ ವೈ ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು.
![](https://shikarinews.com/wp-content/uploads/2023/11/IMG20231118165607-1024x576.jpg)
ತಾಲೂಕಿನ ಮದಗಹಾರನಹಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಓರಿ ಬೆದರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಪೊಲೀಸರು ಹೋರಿ ಹಬ್ಬವನ್ನು ತಡೆದಿದ್ದಾರೆ ಎಂದು ಆರೋಪಿಸಿ ಸಂಸದ ಬಿ ವೈ ರಾಘವೇಂದ್ರ ನೇತೃತ್ವದಲ್ಲಿ ಮದಗ ಹಾರನಹಳ್ಳಿ ಗ್ರಾಮಸ್ಥರ ಪೊಲೀಸ್ ಠಾಣೆ ಎದುರು ಪ್ರತಿಭಟನೆಯನ್ನು ನಡೆಸಿದರು.
![](https://shikarinews.com/wp-content/uploads/2023/11/IMG20231118165642-1024x576.jpg)
ಹೋರಿ ಹಬ್ಬ ಗ್ರಾಮೀಣಾ ರೈತರು ಸಂಭ್ರಮದಿಂದ ಆಚರಿಸುವ ಹಬ್ಬವಾಗಿದ್ದು ರೈತರಿಗೆ ಅಧಿಕಾರಿಗಳು ತೊಂದರೆ ನೀಡದೆ ಹಬ್ಬವನ್ನು ಆಚರಿಸಲು ಮುಕ್ತ ಅವಕಾಶ ನೀಡಬೇಕು ಎಂದರು.
![](https://shikarinews.com/wp-content/uploads/2023/11/IMG20231118165705-1024x576.jpg)
ಈ ವೇಳೆ ಎಂಐಡಿಬಿ ಮಾಜಿ ಅಧ್ಯಕ್ಷರಾದ ಕೆ.ಎಸ್ ಗುರುಮೂರ್ತಿ, ತಾ.ಬಿಜೆಪಿ ಅಧ್ಯಕ್ಷ ವಿರೇಂದ್ರ ಪಾಟೀಲ್, ಯುವ ಮೋರ್ಚಾದ ಶಿವರಾಜ್ ಪಾಟೀಲ್, ಮಾಜಿ ರಾಘವೇಂದ್ರ, ಪ್ರವೀಣ್ ಬೆಣ್ಣೆ ,ರುದ್ರೇಶ್ ,ಶಂಭು ಸೇರಿದಂತೆ ಕಾರ್ಯಕರ್ತರು ಇದ್ದರು.
News by: Raghu Shikari-7411515737