ಶಿಕಾರಿಪುರ ಪಟ್ಟಣದ ದೊಡ್ಡಪೇಟೆಯಲ್ಲಿ ಅನ್ಯಕೊಮಿನ‌ ಯುವನಿಂದ ಚಾಕು‌ ಇರಿತ

ಶಿಕಾರಿಪುರ ಪಟ್ಟಣದ ದೊಡ್ಡಪೇಟೆಯಲ್ಲಿ ಅನ್ಯಕೊಮಿನ‌ ಯುವನಿಂದ ಚಾಕು‌ ಇರಿತ

ಶಿಕಾರಿಪುರ ಪಟ್ಟಣದ ದೊಡ್ಡಪೇಟೆಯಲ್ಲಿ ಅನ್ನಕೋಮಿನ ಸಣ್ಣ ವಿಷಯಕ್ಕೆ ಚಾಕು ಇರಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಪಟ್ಟಣದ ದೊಡ್ಡಪೇಟೆಯ ನಿವಾಸಿ ಸುಶೀಲ್ ಎಂಬುವ ಯುವಕ‌ ಹಲ್ಲೆಗೆ ಒಳಗಾದ ವ್ಯಕ್ತಿ ಎನ್ನಲಾಗಿದೆ.

ದೊಡ್ಡಪೇಟೆಯಲ್ಲಿ ಬೈಕ್ ವೀಲಿಂಗ್ ಮಾಡಬೇಡಿ ಎಂದು ತಿಳಿಸಿದ್ದಕ್ಕೆ ಅನ್ಯಕೋಮಿನ ನಾಲ್ಕೈದು ಯುವಕರು ಏಕಾಏಕಿ ಚಾಕುವಿನಿಂದ ಹಲ್ಲೆ‌ ಮಾಡಿದ್ದಾರೆ ಎಂದು ತಿಳಿದು ಬಂದಿದ್ದು ಹಲ್ಲೆಗೊಳಾಗದ ಯುವಕನನ್ನು ಶಿಕಾರಿಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದುಕೊಂಡು ಹೊಗಲಾಗಿದೆ.

ಘಟನಾ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಸಂಸದ ಬಿವೈ ರಾಘವೇಂದ್ರ ಭೇಟಿ ನೀಡಿ ತಪ್ಪು ಮಾಡಿದವರನ್ನು ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದು ಈ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Admin

Leave a Reply

Your email address will not be published. Required fields are marked *

error: Content is protected !!