ಹಿಂದವಿ ಸ್ವರಾಜ್ಯದ ಸ್ಥಾಪಕ ಛತ್ರಪತಿ ‌ಶಿವಾಜಿ ಮಹಾರಾಜ್: ಚಕ್ರವರ್ತಿ ಸೂಲಿಬೆಲೆ

ಹಿಂದವಿ ಸ್ವರಾಜ್ಯದ ಸ್ಥಾಪಕ ಛತ್ರಪತಿ ‌ಶಿವಾಜಿ ಮಹಾರಾಜ್: ಚಕ್ರವರ್ತಿ ಸೂಲಿಬೆಲೆ

ಶಿಕಾರಿಪುರ ಪಟ್ಟಣದ ಶಿವಗಿರಿ ಮರಾಠ ಮಠದ ಆವರಣದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಸೋಮವಾರ ಯೋಜಿಸಿದ್ದು ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ನೀಡಿದರು.

ಶಿಕಾರಿಪುರ ತಾಲೂಕು, ಮರಾಠ ಸಮಾಜದ ವತಿಯಿಂದ ಶಿವಾಜಿ ಜಯಂತಿ ಹಾಗೂ ಶ್ರೀ ಭವಾನಿ ಶಂಕರ ದೇವಸ್ಥಾನ ತುಳಜಾಭವಾನಿ ದೇವಸ್ಥಾನ ಉದ್ಘಾಟನೆಯ ಅಂಗವಾಗಿ ಚಕ್ರವರ್ತಿ ಸೂಲಿಬೆಲೆಯವರ ಉಪನ್ಯಾಸ ಕಾರ್ಯಕ್ರಮವನ್ನು ನೀಡಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಒಂದು ಸಮಾಜಕ್ಕೆ ಸೀಮಿತವಾಗಿಲ್ಲ ಸ್ಥಾಪನೆಗಾಗಿ ಹೋರಾಡಿ ಮೊಘಲರ ವಿರುದ್ಧ ಹಿಂದೂ ಧರ್ಮವನ್ನು ಉಳಿಸಿದಂತಹ ಒಬ್ಬ ಶ್ರೇಷ್ಠ ನಾಯಕ ಅಂತಹ ಒಬ್ಬ ವ್ಯಕ್ತಿಯನ್ನು ಒಂದು ಸಮಾಜಕ್ಕೆ ಸೀಮಿತಗೊಳಿಸಬಾರದು ಇಡೀ ಪ್ರಪಂಚವೇ ಮೆಚ್ಚುವಂತಹ ಶ್ರೇಷ್ಠ ಸಾಮ್ರಾಟದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಮೊದಲನೇ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದರು.

ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಗುರುರಾಜ ಜಗದಾಪ್ ಹಾಗೂ ಮರಾಠ ಸಮಾಜದ ಬಾಂಧವರು ಉಪಸ್ಥಿತರಿದ್ದರು.

Admin

Leave a Reply

Your email address will not be published. Required fields are marked *

error: Content is protected !!