ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ತೀರ್ಥಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಎನ್ ಐ ಎ ದಾಳಿ..!
![ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ತೀರ್ಥಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಎನ್ ಐ ಎ ದಾಳಿ..!](https://shikarinews.com/wp-content/uploads/2024/03/images-31.jpeg)
ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿಯಲ್ಲಿ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳ ತಂಡವು ಹಳೆ ಆರೋಪಿ ಅಬ್ದುಲ್ ಮತೀನ್, ಬಾಂಬರ್ ಮುಸಾವೀರ್ ಹುಸೇನ್, ಬಾಂಬರ್’ಗೆ ಸಹಾಯ ಮಾಡಿದ ಸಾಧಾರರ್ ನವೀದ್ ಎನ್ನುವವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
![](https://shikarinews.com/wp-content/uploads/2024/03/images-3.jpeg)
ಬಾಂಬರ್ ಮುಸಾವೀರ್ ಹುಸೇನ್ ಚೆನ್ನೈನಿಂದ ಬಂದಾಗ, ಮತೀನ್, ನವೀದ್ ಸಹಾಯ ಮಾಡಿದ್ದರು ಎಂದು ಹೇಳಲಾಗಿದೆ.
ಸದ್ಯ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿರುವ ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.