ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಸ್ ಪಿ ನಾಗರಾಜ ಗೌಡ್ರು ನೇಮಕ..!
![ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಸ್ ಪಿ ನಾಗರಾಜ ಗೌಡ್ರು ನೇಮಕ..!](https://shikarinews.com/wp-content/uploads/2024/04/FB_IMG_1712073337751.jpg)
ಶಿಕಾರಿಪುರ ತಾಲೂಕಿನ ಕಾಂಗ್ರೆಸ್ ಮುಖಂಡ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಭಲ ಪೈಪೋಟಿ ನೀಡಿದ ಎಸ್ .ಪಿ ನಾಗರಾಜ ಗೌಡ ಅವರಿಗೆ ಕಾಂಗ್ರೆಸ್ ಪಕ್ಷ ರಾಜ್ಯ ಮಟ್ಟದಲ್ಲಿ ಪ್ರಬಲ ಹುದ್ದೆ ನೀಡಿದೆ.
![](https://shikarinews.com/wp-content/uploads/2024/04/FB_IMG_1712072381760.jpg)
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಸ್ ಪಿ ನಾಗರಾಜ ಗೌಡ ಅವರನ್ನು ನೇಮಕ ಮಾಡಿ ಆದೇಶವನ್ನು ಹೊರಡಿಸಲಾಗಿದೆ.
ಲೋಕಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯ,ಜಿಲ್ಲಾ, ತಾಲೂಕ್ ಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳು ಬದಲಾವಣೆ ಹೊಸಬರಿಗೆ ಜವಾಬ್ದಾರಿ ನೀಡುವ ಮೂಲಕ ಚುನಾವಣೆ ಸಮರ್ಥವಾಗಿ ಎದುರಿಸಲು ಸಿದ್ದವಾಗಿದೆ.