ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ; ತಪ್ಪಿದ ಭಾರೀ ದುರಂತ..!
![ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ; ತಪ್ಪಿದ ಭಾರೀ ದುರಂತ..!](https://shikarinews.com/wp-content/uploads/2024/04/IMG-20240417-WA0005.jpg)
ಸಾಗರ : ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಪಡವಗೋಡಿನ ಅಮಚಿ ಎಂಬಲ್ಲಿ ಮಂಗಳವಾರ ನಡೆದಿದೆ.
ಬಸ್ಸು ಸಾಗರದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದು, ಬಸ್ಸಿನಲ್ಲಿ ಸುಮಾರು 60 ಜನ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.
ಬಸ್ಸಿನ ಮುಂಭಾಗದ ಗಾಜು ಹಾನಿಯಾಗಿದ್ದು,ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ112 ಪೋಲೀಸ್ ಸಿಬ್ಬಂದಿಗಳಾದ ಹುಚ್ಚಪ್ಪ,ಶಿವಾನಂದ್ ಧಾವಿಸಿದ್ದು,ಮರ ತೆರವುಗೊಳಿಸುವ ಕಾರ್ಯ ನಡೆದಿದೆ.