ಮೈಸೂರು : ಉಳುಮೆ ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕ ಮೃತ್ಯು

ಮೈಸೂರು : ಉಳುಮೆ ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕ ಮೃತ್ಯು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ್ಯಾಕ್ಟರ್ ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.
8 ವರ್ಷದ ಬಾಲಕ ಭವಿಷ್ ಟ್ರ್ಯಾಕ್ಟರ್ ಗೆ ಸಿಲುಕಿ ಸಾವನ್ನಪ್ಪಿದ ಬಾಲಕ. ಟ್ರ್ಯಾಕ್ಟರ್ ರೊಟಾವೆಲ್ಟರ್ಗೆ ಬಾಲಕ ಸಿಲುಕಿ ದೇಹ ಛಿದ್ರ ಛಿದ್ರವಾಗಿದೆ.


ಚಾಮರಾಜನಗರಕ್ಕೆ ವಿವಾಹವಾಗಿದ್ದ ತಾಯಿ ಮಮತಾ, ಮಕ್ಕಳೊಂದಿಗೆ ದೇವರಸನಹಳ್ಳಿಗೆ ಬಂದಿದ್ದರು. ಈ ವೇಳೆ ಭವಿಷ್ ತನ್ನ ಸೋದರಮಾವನ ಜೊತೆ ಟ್ರ್ಯಾಕ್ಟರ್ ನಲ್ಲಿ ಜಮೀನಿಗೆ ತೆರಳಿದ್ದನು.
ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಭವಿಷ್ ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದಿದ್ದಾನೆ ಬಳಿಕ ರೊಟಾವೆಲ್ಟರ್ಗೆ ಸಿಲುಕಿ ಅವಘಡ ಸಂಭವಿಸಿದೆ. ಪ್ರಕರಣ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Admin

Leave a Reply

Your email address will not be published. Required fields are marked *

error: Content is protected !!