ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಕತ್ತು ಹಿಸುಕಿ ಕೊಂದೆ ಎಂದ ಆರೋಪಿ

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಕತ್ತು ಹಿಸುಕಿ ಕೊಂದೆ ಎಂದ ಆರೋಪಿ

ತೀರ್ಥಹಳ್ಳಿ: ನಾಪತ್ತೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕುಶಾಲ್ ಅವರ ಮಗಳಾದ ಪೂಜಾ ಎ.ಕೆ. (24) ಮೃತ ಯುವತಿ. ಪೂಜಾ ಜೂ.30 ರಂದು ನಾಪತ್ತೆಯಾಗಿದ್ದು, ಶವವಾಗಿ ಪತ್ತೆಯಾಗಿದ್ದಾರೆ.


ಕೊಲೆ ಆರೋಪಿ ನಾಲೂರು ಸಮೀಪದ ಮಣಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕತ್ತು ಹಿಸುಕಿ ಕೊಲೆ ಮಾಡಿ ನಾಲೂರು ಸಮೀಪ ಹೊಂಡದಲ್ಲಿ ಹಾಕಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ಮಣಿಯನ್ನು ಘಟನೆ ನಡೆದ ಸ್ಥಳಕ್ಕೆ ಕರೆದು ಸ್ಥಳ ಮಹಜರು ಮಾಡಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತದೆ.

Admin

Leave a Reply

Your email address will not be published. Required fields are marked *

error: Content is protected !!